Breaking News

ಗಂಡನ‌ ಕಿರುಕುಳ : ಆತ್ಮಹತ್ಯೆ ಶರಣಾದ ಗರ್ಭಿಣಿ



ರಾಮನಗರ: ಗಂಡನ‌ ಕಿರುಕುಳ ತಾಳಲಾರದೆ ತನ್ನ ತವರು ಮನೆಯಲ್ಲೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ.ಪತಿಯು ತೊಂದರೆ ಕೊಡುತ್ತಿದ್ದರು ಈ ಕಾರಣ ಎಂಬ ಆರೋಪ ಕೇಳಿಬಂದಿದೆ.

ಗರ್ಭಿಣಿ ಆಗಿರುವ  ಜಾನ್ಹವಿ (23) ಆತ್ಮಹತ್ಯೆಗೆ ಶರಣಾದ ಮುಗ್ಧ ಹೆಣ್ಣು ಮಗಳು. ಕಳೆದ 9 ತಿಂಗಳ ಹಿಂದೆ ಕರ್ಣ ಎಂಬುವನ ಜೊತೆ ವಿವಾಹವಾಗಿತ್ತು. ಕರ್ಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದವನಾಗಿದ್ದು, ಕಳೆದ ಹಲವು ತಿಂಗಳಿಂದ ತಮ್ಮ ಮಗಳಿಗೆ ಹೊಡೆದು ಚಿತ್ರಹಿಂಸೆ ನೀಡುತ್ತಿದ್ದ ಎಂದು ಜಾನ್ಹವಿ ಪೋಷಕರು ಆರೋಪಿಸಿದ್ದಾರೆ.

ಮನೆಯಲ್ಲಿದ್ದ ತಾಯಿ ಕೂಡ ಕೆಲಸಕ್ಕೆಂದು ಹೊರಗೆ ಹೋಗಿದ್ದ ವೇಳೆ ಜಾನ್ಹವಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಐಜೂರು ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *