ಬೆಂಗಳೂರು: ಬಜೆಟ್ ಮಂಡನೆ ಸಂಬಂಧ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಿಸಲಾಗುತ್ತದೆ. ಮಾರ್ಚ್ ಮೊದಲವಾರ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ತಜ್ಞರು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ನಿಯಂತ್ರಣ ಕ್ರಮಗಳನ್ನು ಮುಂದುವರೆಸೋದಾ ಅಥವಾ ರದ್ದು ಪಡಿಸೋದಾ ಎನ್ನುವ ಬಗ್ಗೆ ವರದಿಯನ್ನು ನೀಡುವಂತೆ ತಜ್ಞರಿಗೆ ಸೂಚಿಸಲಾಗಿದೆ. ಅವರು ವರದಿಯನ್ನು ಸಲ್ಲಿಸಿದ ಬಳಿಕ, 3-4 ದಿನಗಳಲ್ಲಿ ಕೋವಿಡ್ ರೂಲ್ಸ್ ಬಗ್ಗೆ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

