ಬೆಂಗಳೂರು : ರಾಜ್ಯದ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.
ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

