Breaking News

ಸಿಎಂ ನೇತೃತ್ವದ ಸಭೆ : ಜ.31ರಿಂದ ನೈಟ್ ಲಾಕ್ ರದ್ದು


ಸಿಎಂ  ನೇತೃತ್ವದಲ್ಲಿ ಇಂದು ಕೋವಿಡ್  ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ನೈಟ್​ ಕರ್ಫ್ಯೂ  ರದ್ದು ಮಾಡಲು ನಿರ್ಧರಿಸಲಾಗಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಪ್ರಮುಖರು ಭಾಗವಹಿಸಿದ್ದರು.

ಸಭೆಯ ನಂತರ ಮಾತನಾಡಿದ ಸಚಿವ ಆರ್​. ಅಶೋಕ್ ಜನವರಿ 31 ರಿಂದ ನೈಟ್ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ತಿಳಿಸಿದ್ಧಾರೆ. ಅಲ್ಲದೇ ಸಭೆಯಲ್ಲಿ ಹೋಟೆಲ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಸಿನಿಮಾ ಹಾಲ್​ಗಳನ್ನು 50:50 ರಷ್ಟು ಮುಂದುವರಿಸಲು, ಮದುವೆಗೆ 200 ಬದಲು 300 ಜನರು ಭಾಗವಹಿಸಲು ಅನುಮತಿ ನೀಡಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *