ಮೈಸೂರು : ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿಂದ ಗೆದ್ದಿದ್ದೇನೆ ಎಂದಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಶನಿವಾರ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ 1816 ಮತಗಳ ಅಂತರದಿಂದ ಸೋತಿದ್ದೇನೆ.ಯಾವುದೇ ಚುನಾವಣೆಯಲ್ಲಿ ಗೆಲುವಿನ ಅಂತರ ಮುಖ್ಯವಾಗುವುದಿಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

