ಚಿಕ್ಕಮಗಳೂರು: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಿಸಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಕರೆ ನೀಡಿದ್ದ ನಗರ ಬಂದ್ ಭಾಗಶಃ ಯಶಸ್ವಿಯಾಯಿತು.
ದಲಿತ ಸಂಘರ್ಷ ಸಮಿತಿ, ಬಿವಿಎಸ್, ಎಸ್ಡಿಪಿಐ, ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಸಂಘದ ಕಾರ್ಯಕರ್ತರು ಬೆಳಿಗ್ಗೆಯೇ ರಸ್ತೆಗಿಳಿದು ದ್ವಿಚಕ್ರ ವಾಹನಗಳಲ್ಲಿ ನಗರದಲ್ಲಿ ಸುತ್ತಿದರು.ಅಂಗಡಿ ಮುಂಗಟ್ಟು ತೆರೆಯದಂತೆ ಮಾಲೀಕರಿಗೆ ಮನವಿ ಮಾಡಿ, ಬಾಗಿಲು ಮುಚ್ಚಿಸಿದರು.
ನಗರದ ಐಜಿ ರಸ್ತೆ, ಎಂ.ಜಿ ರಸ್ತೆ, ಆರ್ಜಿ ರಸ್ತೆಗಳಲ್ಲಿ ಬಟ್ಟೆ, ಚಪ್ಪಲಿ, ದಿನಸಿ, ತರಕಾರಿ, ಹಣ್ಣು, ಚಿನ್ನಾಭರಣ, ಮಾಂಸ, ಮೀನು ಮಾರಾಟ ಮಳಿಗೆಗಳು, ಎಲೆಕ್ಟ್ರಿಕ್, ಹಾರ್ಡ್ವೇರ್ ಮಳಿಗೆಗಳು, ಹೊಟೇಲ್ ಬಾಗಿಲು ಮುಚ್ಚಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

