ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಹೊಸ ವರ್ಷದ 2022 ಬಜೆಟ್ ಮಂಡಿಸಿದ್ದಾರೆ.ಆದರೆ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ನಲ್ಲಿ ನೈಋತ್ಯ ರೈಲ್ವೆ ವಲಯಕ್ಕೆ 6,900 ಕೋಟಿ ರೂ. ಅನುದಾನ ಲಭಿಸಿದೆ.
ಕರ್ನಾಟಕದ ಪಾಲಿಗೇ 6 ಸಾವಿರ ಕೋಟಿ ರೂ. ದೊರಕಿದೆ. ನೈಋತ್ಯ ರೈಲ್ವೆಗೆ ಈವರೆಗೆ ದೊರೆತ ಅತಿ ಹೆಚ್ಚಿನ ಅನುದಾನ ಇದಾಗಿದೆ.
ಇದರಲ್ಲಿ ಕರ್ನಾಟಕ ಸರ್ಕಾರ ಜೋಡಿಸಿಕೊಡಬೇಕಿರುವ 780 ಕೋಟಿ ರೂ. ಸೇರಿದೆ. 2020-21ನೇ ಸಾಲಿನ ಬಜೆಟ್ನಲ್ಲಿ ನೈಋತ್ಯ ರೈಲ್ವೆಗೆ 4,900 ಕೋಟಿ ರೂ. ಲಭಿಸಿತ್ತು. ಈ ಬಾರಿ ಶೇ. 40 ಹೆಚ್ಚು ಅನುದಾನ ಸಿಕ್ಕಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

