Breaking News

ಸಿಎಂ ಇಬ್ರಾಹಿಂ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ.ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 ಶಾಸಕರು ಕಾಂಗ್ರೆಸ್ ಬೇಡ ಅಂತ ಬಿಜೆಪಿ ಸೇರಿದರು. ಮೊದಲು ಅವರ ಶಾಸಕರನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿ ಎಂದು ತಿರುಗೇಟು ನೀಡಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *