Breaking News

ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ನಿಧನ


ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.

ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು.
ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *