ನವದೆಹಲಿ : ICRISATನ 50ನೇ ವಾರ್ಷಿಕೋತ್ಸವದ ಪ್ರಯುಕ್ತ ಮತ್ತು 11ನೇ ಶತಮಾನದ ಭಕ್ತಿ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಹೈದರಾಬಾದ್ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಹೈದರಾಬಾದ್ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ದಕ್ಷಿಣ ಭಾರತದ ಸಮಾಜ ಸುಧಾರಕರಲ್ಲಿ ಅತ್ಯಂತ ಪ್ರಮುಖರೆನಿಸಿದವರು ಶ್ರೀ ರಾಮಾನುಜಾಚಾರ್ಯರು. ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕರಾಗಿದ್ದ ಶ್ರೀಗಳು, ಭೂಮಿ ಮೇಲೆ ಅವತರಿಸಿ ಸಾವಿರ ವರ್ಷ ಪೂರ್ಣಗೊಂಡಿರುವ ನಿಮಿತ್ತ 216 ಅಡಿ ಎತ್ತರದ ಪ್ರತಿಮೆ ಹೈದರಾಬಾದ್ನ ಮುಚಿಂತಲ್ ಎಂಬಲ್ಲಿ ಲೋಕಾರ್ಪಣೆಗೊಳ್ಳಲು ಸಿದ್ಧವಾಗಿದ್ದು, ನಾಳೆ ಪಿಎಂ ಮೋದಿ ಉದ್ಘಾಟಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

