Breaking News

ಸ್ನೇಹಿತನ ಪತ್ನಿಗೆ ಬಾಳು ಕೊಟ್ಟ ಯುವಕ

ಕೊರೊನಾ ಬಲಿಯಾದ ಸ್ನೇಹಿತನ ಪತ್ನಿಯನ್ನು ವರಿಸುವ ಮೂಲಕ ಆಕೆಗೆ ಬಾಳು ಕೊಟ್ಟು ಆದರ್ಶ ಮೆರೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಹನೂರಿನ ಅಂಬಿಕಾ ಕಳೆದ 8 ವರ್ಷಗಳ ಹಿಂದೆ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ ಚೇತನ್‌ ಕುಮಾರ್‌ ಅವರನ್ನು ಮದುವೆಯಾಗಿದ್ದರು. ಚೇತನ್‌ ಬೆಂಗಳೂರಿನಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸದಲ್ಲಿದ್ದರು. ಆದರೆ ಕೊವಿಡ್‌ 2ನೇ ಅಲೆಯಲ್ಲಿ ಚೇತನ್‌ ಮೃತಪಟ್ಟಿದ್ದ.

ಚಾಮರಾಜನಗರ ತಾಲ್ಲೂಕಿನ ನಂಜದೇವನಪುರ ಗ್ರಾಮದ ಲೋಕೇಶ್‌ ಗೆಳೆಯನ ಪತ್ನಿಯನ್ನು ಮದುವೆಯಾದ ಯುವಕ. ಲೋಕೇಶ್‌ ಹಾಗೂ ಅಂಬಿಕಾ ಬೆಂಗಳೂರಿನ ಸರ್ಪಭೂಷಣ ಮಠದಲ್ಲಿ ಇತ್ತೀಚೆಗೆ ಮದುವೆಯಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಅಂಬಿಕಾ ಗಂಡನನ್ನ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು. ಆ ಆಸರೆಗೆ ಬಂದ ಲೋಕೇಶ್‌, ಎರಡೂ ಮನೆಯವರನ್ನೂ ಒಪ್ಪಿಸಿ ಅಂಬಿಕಾರನ್ನು ಮದುವೆಯಾಗಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *