ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರ ಮನವೊಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಆಪ್ತ ಎಚ್.ಸಿ. ಮಹದೇವಪ್ಪ ಮೂಲಕ ಇಬ್ರಾಹಿಂ ಜೊತೆ ಸಂಧಾನ ನಡೆಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇಬ್ರಾಹಿಂ ಜೊತೆ ಮಾತನಾಡಿರುವುದಾಗಿ ಮಹದೇವಪ್ಪ ಹೇಳಿದ್ದಾನೆ. ಎಲ್ಲರೊಂದಿಗೆ ಚರ್ಚಿಸುತ್ತೇನೆ ಎಂದು ಮಹದೇವಪ್ಪನಿಗೆ ಇಬ್ರಾಹಿಂ ಹೇಳಿದ್ದಾನೆ. ನಾನು ಕರೆ ಮಾಡಿಯಷ್ಟೇ ಅಲ್ಲ, ಮನೆಗೂ ಹೋಗಿ ಮಾತನಾಡುತ್ತೇನೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

