ನವಲಗುಂದ: ಪಟ್ಟಣದ ನೀಲಮ್ಮನ ಕೆರೆ ಎದುರು ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಣ್ಣಿಗೇರಿಯತ್ತ ಹೊರಟ ಟಿಪ್ಪರ್ವೊಂದು ಪಟ್ಟಣದ ನೀಲಮ್ಮನ ಕೆರೆ ಎದುರು ಇರುವ ಕ್ರಾಸ್ ಬಳಿ ತಿರುಗುವ ಸಂದರ್ಭದಲ್ಲಿ ಏಕಾಏಕಿ ಬೈಕ್ ಮೇಲೆ ಹರಿದಿದೆ. ತಕ್ಷಣವೇ ಸವಾರ ಬೈಕ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಮಠಪತಿ ಭೇಟಿ ನೀಡಿ, ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

