ಬೆಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

