Breaking News

ಹಿಜಾಬ್ ವಿವಾದ : ಇಂದು ಸಂಜೆ ಗೃಹ ಸಚಿವರೊಂದಿಗೆ ಮಕತ್ವದ ಸಭೆ


ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಇದ್ರಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಇನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡ ಭಾಗಿಯಾಗಲಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಮಹತ್ವದ ಚರ್ಚೆ ನಡೆಸುವ ಸಲುವಾಗಿ ಇಂದು 7 ಗಂಟೆಗೆ ಗೃಹ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ನಾಳೆ (ಫೆ.9) ರಾಜ್ಯ ಸಚಿವ ಸಂಪುಟದ ಸಭೆ ನಿಗದಿಯಾಗಿದೆ ಎಂದು ತಿಳಿಸಿದೆ.

Share News

About admin

Check Also

ಹಾಡಹಗಲೇ ಜಿಮ್ ತರಬೇತುದಾರನ ಮರ್ಡರ್! 20 ಸುತ್ತು ಗುಂಡು ಹಾರಿಸಿ ಕೊಲೆಗೈದ ದುಷ್ಕರ್ಮಿಗಳು!

ನವದೆಹಲಿ: ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಜಿಮ್ ತರಬೇತುದಾರನನ್ನು ದುಷ್ಕರ್ಮಿಗಳು ಸುಮಾರು 20 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. …

Leave a Reply

Your email address will not be published. Required fields are marked *