ಬೆಂಗಳೂರು: ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

