Breaking News

ಲಾರಿ ಕಾರು ಮಧ್ಯೆ ಅಪಘಾತ :ಶಾಸಕ ಸೇರಿ 3 ಜನರಿಗೆ ಗಾಯ

ಚಾಮರಾಜನಗರ: ತಾಲೂಕಿನ ಬಾಣಳ್ಳಿ ಗೇಟ್ ಬಳಿಯಲ್ಲಿ ಕಳೆದ ರಾತ್ರಿ ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಬಾಲರಾಜು ಅವರ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮದಿಂದಾಗಿ ಮಾಜಿ ಶಾಸಕ ಬಾಲರಾಜು ಹಾಗೂ ಕಾರು ಚಾಲಕ ಮೋಹನ್ ಮತ್ತು ಕ್ಲೀನರ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಈ ಅಪಘಾತದಲ್ಲಿ ಮಾಜಿ ಶಾಸಕ ಸೇರಿ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಮಾಜಿ ಶಾಸಕ ಎಸ್ ಬಾಲರಾಜು ಪ್ರಾಣಾಪಾಯದಿಂದ ಪಾರಾಗಿದ್ದರೇ, ಕಾರು ಚಾಲಕ ಮೋಹನ್, ಕ್ಲೀನರ್ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *