Breaking News

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ : ಯುವಕನ ಮೇಲೆ ಹಲ್ಲೆ

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಎಂಬಲ್ಲಿ 23 ವರ್ಷದ ಯುವಕನಿಗೆ ಮೊಳೆಯಿಂದ ಇರಿದು ಘಾಸಿಗೊಳಿಸಲಾಗಿದೆ. ಅಲ್ಲದೆ, ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್​ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ ಜತೆ ಪೊಲೀಸರು ಸಭೆ ನಡೆಸಿದ್ದಾರೆ.

ಒಂದು ಗುಂಪಿನವರಿಂದ ಹಲ್ಲೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಿನ್ನೆ ಹರಿಹರ, ದಾವಣಗೆರೆಗೆ ಸೀಮಿತವಾಗಿದ್ದ ನಿಷೇಧಾಜ್ಞೆ ಇಂದು ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಹಾಂತೇಶ ಬೀಳಗಿ ಆದೇಶ ನೀಡಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *