ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

