Breaking News

ಹಿಜಾಬ್ ವಿವಾದ ಕುರಿತು ಮಹತ್ವದ ತೀರ್ಮಾನ ನೀಡಿದ ಹೈಕೋರ್ಟ್


ಬೆಂಗಳೂರು: ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೀಠ ಬುಧವಾರ ಸಿಜೆ ಅಂಗಳಕ್ಕೆ ರವಾನಿಸಿದ ಬೆನ್ನಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೂ ಸೇರಿ ಮೂವರು ನ್ಯಾಯ ಮೂರ್ತಿಗಳನ್ನೊಳಗೊಂಡ ಪೂರ್ಣಪೀಠ ರಚನೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರನ್ನೊಳಗೊಂಡ ಈ ಪೂರ್ಣಪೀಠ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ನಡೆಸಿದೆ.

ಸದ್ಯ ಪ್ರಕರಣ ಸಂಬಂಧ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವ ವಿಚಾರವಾಗಿ ಪ್ರಸ್ತಾಪಿಸಿದ ಪೂರ್ಣಪೀಠ, ಶಾಲೆ-ಕಾಲೇಜುಗಳನ್ನು ಆರಂಭಿಸುವಂತೆ ಸೂಚನೆ ನೀಡಿದೆ. ಆದರೆ ಪ್ರಕರಣ ಇನ್ನೂ ಇತ್ಯರ್ಥವಾಗದ್ದರಿಂದ ಮುಂದಿನ ಆದೇಶದವರೆಗೂ ಯಾವ ವಿದ್ಯಾರ್ಥಿಗೂ ಹಿಜಾಬ್​ ಅಥವಾ ಕೇಸರಿ ಶಾಲು ಸೇರಿ ಧಾರ್ಮಿಕ ಉಡುಪು ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ಹೇಳಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *