Breaking News

ಪ್ರೀತಿಸಿ ಮದುವೆಯಾದ ಪತಿಯ ಕೈಯಲೇ ಪ್ರಾಣ ಬಿಟ್ಟ ಪತ್ನಿ



ಮೈಸೂರು: ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಎ.ಕೆ ಕಾಲೋನಿಯಲ್ಲಿ ನಡೆದಿದೆ.

ಸಂಧ್ಯಾ (23) ಕೊಲೆಯಾದ ದುರ್ದೈವಿ. ಪತಿ ಕಿರಣ್ (27) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.
ಸಂಧ್ಯಾ ಹಾಗೂ ಕಿರಣ್​ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಿರಣ್ ಮೂರು ತಿಂಗಳು ಪುನರ್ವಸತಿ ಕೇಂದ್ರದಲ್ಲಿದ್ದು ಮತ್ತೆ ಮನೆಗೆ ವಾಪಸ್​ ಆಗಿದ್ದ.ಇನ್ನು ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಪತ್ನಿ ಮೇಲೆ ಕೋಪಗೊಂಡ ಕಿರಣ್​ ಆಕೆ ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *