ಧಾರವಾಡ: ಸಾಲ ವಾಪಸ್ ಕೊಡಿ ಎಂದು ಕೇಳಲು ಹೋದವಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.
ಕೌಸಲ್ಯ ಎಂಬ ಮಹಿಳೆ ಸುಶೀಲವ್ವಳ ಬಳಿ ಕರಾರು ಪತ್ರದೊಂದಿಗೆ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಈ ಸಾಲವನ್ನು ವಾಪಸ್ ಕೇಳಲು ಹೋದಾಗ ಕೌಸಲ್ಯ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾಳೆ ಎಂದು ಸುಶೀಲವ್ವ ಆರೋಪಿಸಿದ್ದಾಳೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

