Breaking News

ಸಾಲ ವಾಪಸ್ ಕೇಳಲು ಹೋದ ಮಹಿಳೆ ಮೇಲೆ ಹಲ್ಲೆ

ಧಾರವಾಡ: ಸಾಲ ವಾಪಸ್ ಕೊಡಿ ಎಂದು ಕೇಳಲು ಹೋದವಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ಕೌಸಲ್ಯ ಎಂಬ ಮಹಿಳೆ ಸುಶೀಲವ್ವಳ ಬಳಿ ಕರಾರು ಪತ್ರದೊಂದಿಗೆ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಈ ಸಾಲವನ್ನು ವಾಪಸ್ ಕೇಳಲು ಹೋದಾಗ ಕೌಸಲ್ಯ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾಳೆ ಎಂದು ಸುಶೀಲವ್ವ ಆರೋಪಿಸಿದ್ದಾಳೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *