ಮೈಸೂರು: ಸಂಸದ ಪ್ರತಾಪ್ ಸಿಂಹನಂತಹ ಮೂರ್ಖ ಯಾರೂ ಇಲ್ಲ. ತಂದೆ ಮುಖ್ಯನಾ?, ತಾಯಿ ಮುಖ್ಯನಾ ಅಂತ ಕೇಳಲು ಆಗುತ್ತಾ. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಸಿಗುತ್ತಾ? ಊಟ ಬೇಕಾ?, ನೀರು ಬೇಕಾ ಅಂದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು. ಹಿಜಾಬ್ ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.
ನೀವು ಪಾರಂಪರಿಕ, ಐತಿಹಾಸಿಕ ಮೈಸೂರು ಸಂಸದರು. ಮೈಸೂರಿನ ಘನತೆ ಉಳಿಸಿ, ಅದಕ್ಕೆ ಕಪ್ಪುಚುಕ್ಕೆ ತರಬೇಡಿ. ಸಾಮಾನ್ಯವಾಗಿ ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ. ಆದರೆ ಸಂಸದ ಪ್ರತಾಪ್ಸಿಂಹ ಸಮಸ್ಯೆಗೆ ಪರಿಹಾರ ಸಿಕ್ಕಾಗ ಸಮಸ್ಯೆ ಸೃಷ್ಟಿ ಮಾಡುತ್ತಾರೆ ಎಂದು ಕಿಡಿಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

