ವಿಧಾನಸಭೆ : ಬೆಂಗಳೂರು ನಗರದ ಅಭಿವೃದ್ಧಿ ಕಾರ್ಯ ಮತ್ತು ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ 8,015 ಕೋಟಿ ರು.
ಅನುಮೋದನೆ ನೀಡಿದ್ದು, 2022-23ರಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆ ಎರಡನೇ ಹಂತವನ್ನು ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹೇಳಿದ್ದಾರೆ.
ಸೋಮವಾರ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಬೆಂಗಳೂರು ನಗರದ ವ್ಯವಸ್ಥಿತ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. 8,015 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಮೂಲಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ. ಮೆಟ್ರೋ ರೈಲು ಸೇವೆಯನ್ನು ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. ಎರಡನೇ ಹಂತದಲ್ಲಿ 32.54 ಕಿ.ಮೀ.ಗಳ ಉದ್ದದ ಮಾರ್ಗವನ್ನು 2022-23ರಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

