ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ.
ಕಣವಿ ಅವರ ಅಂತ್ಯಕ್ರಿಯೆ ಸಂಜೆ 5ಕ್ಕೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ನಡೆಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

