ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,77,238 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

