ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ.
ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

