ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಮುಕ್ರಂಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ಕಾಂಗ್ರೆಸ್ ಮುಖಂಡನ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

