Breaking News

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು

ಮಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮಂಗಳೂರು ನಗರದ ಉರ್ವಾದ ನಿವಾಸಿ ರಾಜೇಶ್ (30) ಮೃತ ವ್ಯಕ್ತಿ. ನಗರದ ಜ್ಯೋತಿ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು ಕದ್ದೊಯುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳ ಪೈಕಿ ರಾಜೇಶ್​ಗೆ ರಾತ್ರಿ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆ ನಡೆಸಿದ ವೈದ್ಯರಿಂದ ರಾಜೇಶ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಜಿಲ್ಲಾಸ್ಪತ್ರೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿದ್ದು, ಆಸ್ಪತ್ರೆ ವೈದ್ಯರು, ರಾಜೇಶ್ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ನಡೆದ ಎಲ್ಲಾ ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಲಾಗುತ್ತೆ. ಉತ್ತರ ವಿಭಾಗದ ಎ.ಸಿ.ಪಿ ಮಹೇಶ್ ಕುಮಾರ್ ನೇತ್ರತ್ವದಲ್ಲಿ ತನಿಖೆಗೆ ಆದೇಶಿಸಿದ್ದೇನೆ. ನಮ್ಮ ತನಿಖೆಯ ಬಳಿಕ ಸಿಐಡಿಯಿಂದ ಪ್ರಕರಣದ ಕುರಿತು ತನಿಖೆ ನಡೆಯುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮೃತರ ಕುಟುಂಬಸ್ಥರಿಗೆ ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *