ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಇಳಿಕೆಯ ಜೊತೆ ಜೊತೆಗೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲೂ ಕುಸಿತ ಕಂಡು ಬಂದಿದೆ. ಶುಕ್ರವಾರ 1,333 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 19 ಮಂದಿ ಮೃತರಾಗಿದ್ದಾರೆ.4,890 ಮಂದಿ ಚೇತರಿಸಿಕೊಂಡಿದ್ದಾರೆ.
ಜನವರಿ 3 ರಂದು 1,290 ಪ್ರಕರಣ ದಾಖಲಾದ ಬಳಿಕದ ಅತ್ಯಂತ ಕನಿಷ್ಠ ಪ್ರಕರಣ ವರದಿಯಾಗಿದೆ. 83,555 ಕೋವಿಡ್ ಪರೀಕ್ಷೆ ನಡೆದಿದ್ದು ಶೇ.1.59ರ ಪಾಸಿಟಿವಿಟಿ ದರ ದಾಖಲಾಗಿದೆ. 26 ದಿನ (ಜನವರಿ 23)ರ ಬಳಿಕ ಮೊದಲ ಬಾರಿಗೆ ದೈನಂದಿನ ಕೋವಿಡ್ ಸಾವಿನ ಸಂಖ್ಯೆ 20ರೊಳಗೆ ಬಂದಿದೆ. ಮರಣ ದರ ಶೇ. 1.42 ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

