Breaking News

ಬಣ್ಣ ಲೋಕಕ್ಕೆ ಪಾದಾರ್ಪಣೆ ಮಾಡಿದ ಮಾಜಿ ಸಿಎಂ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಕನ್ನಡದ ತನುಜಾ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತನುಜಾ ಎಂಬ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್​ನಲ್ಲಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ.

ತುನುಜಾ ನೈಜ ಘಟನೆ ಆಧರಿಸಿದ ಸಿನಿಮಾ. ಕೊವಿಡ್​ ಸಂದರ್ಭದಲ್ಲಿ ನೀಟ್​ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆಯೇ ಈಗ ಸಿನಿಮಾವಾಗಿದ್ದು, ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿಯವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅದರಲ್ಲಿ ಬಿ.ಎಸ್.​ ಯಡಿಯೂರಪ್ಪ ನಟಿಸಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *