ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯವರು ಎಎಸ್ಐವೊಬ್ಬರಿಗೆ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ಸಹದೇವನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುರಾಣಿಕಮಠ ಎಂಬ ಎಎಸ್ಐ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಯೊಡೆದು ತೀವ್ರ ರಕ್ತಸ್ರಾವವಾಗಿದೆ.
ಸಹದೇವನಗರದಲ್ಲಿನ ಪುರಾಣಿಕಮಠ ಅವರ ಮನೆಯ ಪಕ್ಕದಲ್ಲಿರುವ ಭರತೇಶ ಎಂಬಾತನೇ ಇಟ್ಟಿಗೆಯಿಂದ ಹೊಡೆದಿದ್ದು, ಎಎಸ್ಐ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಸಿಗಬೇಕಿದೆ.