ಬೆಂಗಳೂರು: ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ.
ಆದರೆ ಕೆಲವು ಗುಂಪುಗಳು ಜನರಿಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿವೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.
ಇನ್ನೂ ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹರ್ಷ ಎಂಬ ಯುವಕನ ಹತ್ಯೆ ಮಾಡಲಾ ಗಿದ್ದು, ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

