ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್ಐಆರ್ ದಾಖಲಾಗಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಎ1, ಎ2 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಯಿತು. ನಿನ್ನೆ ಗಲಾಟೆ ವೇಳೆ ಗಾಯಗೊಂಡಿದ್ದಾಗಿ 8 ಜನರಿಂದ ದೂರು ನೀಡಲಾಗಿದೆ. 18 ವಾಹನಗಳ ಮೇಲೆ ದಾಳಿ ನಡೆಸಿ ಬೆಂಕಿಯನ್ನೂ ಹಚ್ಚಿದ್ದಾರೆ. ಶಿವಮೊಗ್ಗದಲ್ಲಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹತ್ಯೆಯಾಗಿರುವ ಹರ್ಷನ ವಿರುದ್ಧ 2 ಪ್ರಕರಣ ದಾಖಲಾಗಿದ್ದವು. ಎ1, ಎ3, ಎ4, ಎ5 ಹರ್ಷನ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಎ2, ಎ6 ಹಂತಕರಿಗೆ ಸಹಕಾರ ನೀಡಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೆವು. 6 ಜನರ ಪಾತ್ರ ಕಂಡುಬಾರದ ಹಿನ್ನೆಲೆ ಬಿಟ್ಟು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.
ಎ1 ಮೊಹಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್ ಬಂಧಿಸಲಾಗಿದೆ. ಎಲ್ಲಾ 6 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಗಿದೆ. ಬಂಧಿತ 6 ಆರೋಪಿಗಳ ಪೈಕಿ ನಾಲ್ವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಭೆಯಲ್ಲಿ ಭಾಗಿಯಾಗಿದ್ದ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಶಿವಮೊಗ್ಗದಲ್ಲಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹರ್ಷ ಹತ್ಯೆ ಪ್ರಕರಣದಲ್ಲಿ ಕಾಸಿಫ್, ಸೈಯದ್ ನದೀಮ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗದಲ್ಲಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಬಿಜೆಪಿ ಕಚೇರಿಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

