ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸ್ವಾಮಿತ್ವ ಹಕ್ಕುಪತ್ರ ವಿತರಣೆ’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ಕಲಬುರಗಿ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ.
‘ರಾಜ್ಯದ ಶಿವಮೊಗ್ಗ, ವಿಜಯನಗರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸ್ವಾಮಿತ್ವ ಹಕ್ಕುಪತ್ರ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ.ಕಲಬುರಗಿ ತಾಲ್ಲೂಕಿನ ಭೀಮಳ್ಳಿ ಗ್ರಾಮದಲ್ಲಿ ಕೂಡ ಈ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಪ್ರಧಾನಿ ಭೇಟಿಯ ಬಗ್ಗೆ ನಮಗೆ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

