ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ನ್ಯಾಯಾಧೀಶರನ್ನು ನಿಂಧಿಸಿ, ಫೇಸ್ ಬುಕ್ ನಲ್ಲಿ ಮಾಡಿದ ಆರೋಪದಲ್ಲಿ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಟ ಚೇತನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇಂದು ಆ ದಿನಗಳ ಖ್ಯಾತಿಯ ನಟ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 32ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, ನಟ ಚೇತನ್ ಗೆ 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

