ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಲ್ಲಿ ಇಲ್ಲಿಯವರೆಗೂ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರ ಮನೋಜ್ ರಂಜನ್ ತಿಳಿಸಿದ್ದಾರೆ.
ಉಕ್ರೇನ್ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, ಸಂಬಂಧಿಕರು, ಸ್ನೇಹಿತರ ಬಳಗದಿಂದ ಕರೆಗಳು ಬರುತ್ತಿವೆ. ಆ ಆಧಾರದಲ್ಲಿ ಉಕ್ರೇನ್ನಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬಹುದು ಎಂದು ಅಂದಾಜಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಿಂದ ತೆರಳಿ ಉಕ್ರೇನ್ನಲ್ಲಿ ಸಿಲುಕಿಕೊಂಡಿರುವವರ ಸಹಾಯಕ್ಕಾಗಿ http://ukraine.karnataka.tech ಎಂಬ ವೆಬ್ ಪೋರ್ಟಲ್ ತೆರೆಯಲಾಗಿದೆ. ಸಂಬಂಧಪಟ್ಟವರು ಉಕ್ರೇನ್ನಲ್ಲಿ ಸಮಸ್ಯೆಗೆ ಸಿಲುಕಿರುವವರ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

