Breaking News

ವಕೀಲ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಗದೀಶ್ ಅವರ ವಿರುದ್ಧ ದಾಖಲಿಸಿರುವ ಜಾತಿ ನಿಂದನೆ ಹಾಗೂ ಇತರೆ ಪ್ರಕರಣಗಳನ್ನು ಕೈಬಿಟ್ಟು, ಅವರ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಲಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *