ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಗದೀಶ್ ಅವರ ವಿರುದ್ಧ ದಾಖಲಿಸಿರುವ ಜಾತಿ ನಿಂದನೆ ಹಾಗೂ ಇತರೆ ಪ್ರಕರಣಗಳನ್ನು ಕೈಬಿಟ್ಟು, ಅವರ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

