ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ನಿಯಂತ್ರಿಸೋದಕ್ಕಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಫೆಬ್ರವರಿ 28ರ ಬೆಳಿಗ್ಗೆ 9 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

