Breaking News

ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ವಿರುದ್ಧ ಪ್ರಕರಣ ರದ್ದು


ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ನಗದು ಪತ್ತೆ ಯಾಗಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹಾಗೂ ಪಕ್ಷದ ಮುಖಂಡ ಸತೀಶ್‌ಚಂದ್ರ ಮಿಶ್ರಾ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಯಾವತಿ ಮತ್ತು ಸತೀಶ್‌ ಚಂದ್ರ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶವನ್ನು ಮಾಡಿದೆ.

ನಗದು ಪತ್ತೆ ವಿಚಾರ ಸಂಬಂಧ ಅರ್ಜಿದಾರರು ನೀಡಿದ ವಿವರಣೆಯನ್ನು ಕೇಂದ್ರ ಚುನಾವಣಾ ಆಯೋಗ ಒಪ್ಪಿದೆ. ಹಾಗಾಗಿ ನ್ಯಾಯದ ದೃಷ್ಟಿಯಿಂದ ಪ್ರಕರಣ ಮುಂದುವರಿಸುವುದು ಸರಿಯಲ್ಲ ಎಂದು ಹೇಳಿರುವ ಹೈಕೋರ್ಟ್‌ ಅರ್ಜಿಯನ್ನು ಮಾನ್ಯ ಮಾಡಿ ಬೆಂಗಳೂರಿನ 42ನೇ ಹೆಚ್ಚುವರಿ ಚೀಫ್‌ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಮತ್ತು ಪ್ರಕರಣವನ್ನು ರದ್ದುಗೊಳಿಸಿದೆ.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *