ಬೆಂಗಳೂರು: ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್ʼಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ.
ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy ), ‘ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್ ಕರೆತರಬೇಕು’ ಎಂದು ಹೇಳಿದ್ದಾರೆ.
ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಕನ್ನಡಿಗರು ಉಕ್ರೇನ್ʼನಲ್ಲಿ ಜೀವಭಯದಿಂದ ತತ್ತರಿಸಿದ್ದಾರೆ. ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

