ಕಲಬುರಗಿ: ಜಿ.ಪಂ., ತಾ.ಪಂ. ಚುನಾವಣೆ ಯನ್ನು ಒಬಿಸಿ ಮೀಸಲಾತಿ ಇಲ್ಲದೇ ನಡೆಸಬಾರದು ಎನ್ನುವ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ. ಆದರೆ ಯಾವಾಗ ಚುನಾವಣೆ ನಡೆಯುತ್ತದೆ ಎನ್ನುವುದನ್ನು ಈಗಲೇ ಹೇಳಲಿಕ್ಕೆ ಆಗದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಪಂ., ತಾ.ಪಂ. ಚುನಾವಣೆ ಸಂಬಂಧ ಈಗಾಗಲೇ ಹಲವು ಸುತ್ತು ಚರ್ಚಿಸಲಾಗಿದೆ. ಆದರೆ ಚುನಾವಣೆ ಇಂತಹದ್ದೇ ನಿರ್ದಿಷ್ಟ ಸಮಯದಲ್ಲಿ ನಡೆಯಬಹುದು ಎನ್ನುವುದು ತಿಳಿಯುತ್ತಿಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

