ರಾಮನಗರ : ಮೊದಲ ದಿನದ ಮೇಕೆದಾಟು ಪಾದಯಾತ್ರೆ ರೇಷ್ಮೆ ನಗರಿ ರಾಮನಗರದಿಂದ ಆರಂಭವಾಗಿ 16 ಕಿ.ಮಿ. ಸಂಚರಿಸಿ ಬಿಡದಿ ನಗರ ತಲುಪಿದೆ.
ಮೊದಲ ದಿನದ ಮೇಕೆದಾಟು ಪಾದಯಾತ್ರೆ ಯಶಸ್ವಿ
ಮೊದಲ ದಿನದಲ್ಲಿ ಹೊರಟ ಪಾದಯಾತ್ರೆಯು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ಜಾನಪದ ಕಲಾ ತಂಡಗಳು ಕೂಡ ಪಾದಯಾತ್ರೆಗೆ ಸಾಥ್ ನೀಡಿದ್ದವು. ನಂತರ ಮಧ್ಯಾಹ್ನ ಮಾಯಗನಹಳ್ಳಿಯಲ್ಲಿ ಭೋಜನ ಮುಗಿಸಿದ ಮುಖಂಡರು, ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಪಾದಯಾತ್ರೆ ಮುಂದುವರೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

