ಹೈದರಾಬಾದ್ : ದೇಶದಲ್ಲಿ ಕೋವಿಡ್ 3ನೇ ಅಲೆ ಇನ್ನೇನು ಅಂತ್ಯಕ್ಕೆ ಸಮೀಪಿಸಿದೆ ಅನ್ನುವಷ್ಟರಲ್ಲೇ, 2022ರ ಜೂನ್ ಅಂತ್ಯದ ವೇಳೆಗೆ ದೇಶದ ಮೇಲೆ ಸೋಂಕಿನ 4ನೇ ದಾಳಿಯ ಸಾಧ್ಯತೆ ಇದೆ ಎಂದು ಐಐಟಿ ಕಾನ್ಪುರದ ತಜ್ಞರ ತಂಡ ಎಚ್ಚರಿಸಿದೆ.
ಒಂದು ವೇಳೆ 4ನೇ ಅಲೆ ಕಾಣಿಸಿಕೊಂಡಿದ್ದೇ ಆದಲ್ಲಿ ಅದರ ಪರಿಣಾಮಗಳು, ಆಗ ಹುಟ್ಟಿಕೊಳ್ಳಬಹುದಾದ ಹೊಸ ರೂಪಾಂತರಿಯ ತೀವ್ರತೆ, ಕೋವಿಡ್ ಲಸಿಕೆ ವಿತರಣೆಯ ಸ್ಥಿತಿಗತಿ, ಬೂಸ್ಟರ್ ಡೋಸ್ ನೀಡಿಕೆ ಅವಲಂಬಿಸಿರುತ್ತದೆ ಎಂದು ಹೇಳಿದೆ. ಐಐಟಿ ಕಾನ್ಪುರದ ಎಸ್.ಪಿ.ರಾಜೇಶ್ಭಾಯಿ, ಶುಭ್ರಾಶಂಕರ್ ಧರ್ ಮತ್ತು ಶಲಭ್ ಅವರನ್ನೊಳಗೊಂಡ ತಂಡವು ಬೂಟ್ಸ್ಟ್ರಾಪ್ ಎಂಬ ಸಾಂಖ್ಯಿಕ ಮಾದರಿಯನ್ನು ಆಧರಿಸಿ ವರದಿಯೊಂದನ್ನು ತಯಾರಿಸಿದ್ದು, ಅದರಲ್ಲಿ ಈ ಮಾಹಿತಿ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

