ಹೊನ್ನಾಳಿ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಜನತೆಗೆ ನಾಗರಿಕ ಸೌಲಭ್ಯಗಳನ್ನು ಕೊಡುವ ದೃಷ್ಟಿಯಿಂದ ರಾಜ್ಯದ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದ ಸುಮಾರು 3491 ಗ್ರಾಮಗಳ ಪೈಕಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ. ಬ್ರೇಚಾರ್ ಗ್ರಾಮಗಳು ಎಂದರೆ ಈ ಗ್ರಾಮಗಳಲ್ಲಿ ನಾಗರಿಕ ಸೌಲಭ್ಯಗಳು ಸಿಗುವುದಿಲ್ಲ. ಕಾನೂನು ಬದ್ಧವಾಗಿರುವುದಿಲ್ಲ. ಹೀಗಾಗಿ ಜನತೆಗೆ ನಾಗರಿಕ ಸೌಲಭ್ಯಗಳನ್ನು ಕೊಡುವ ದೃಷ್ಟಿಯಿಂದ ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

