ಮೈಸೂರು : ಸಾಹಿತಿ ಪ್ರೊ.ಕೆ. ಭೈರವಮೂರ್ತಿ(77) ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಿತು.
ಸಾಹಿತಿ ಪ್ರೊ.ಕೆ. ಭೈರವಮೂರ್ತಿ ಅವರಿಗೆ ಒಬ್ಬ ಪುತ್ರ ಇದ್ದಾರೆ. ಪ್ರೊ.ಭೈರವಮೂರ್ತಿಯವರು ಮೇ,30,1945ರಂದು ಮಂಡ್ಯ ಜಿಲ್ಲೆಯ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ಕೆ.ಎನ್, ಕೃಷ್ಣ ಮೂರ್ತಿ, ತಾಯಿ ಗೌರಮ್ಮ.
ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ. ಮತ್ತು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂಎ ಪದವಿಯಲ್ಲಿ ಮೂರನೆಯ ಶ್ರೇಣಿ ಪಡೆದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

