Breaking News

ಕರುನಾಡಿಗೆ ಕರೆ ನೀಡಿದ ಡಿಕೆಶಿ

ಬೆಂಗಳೂರು: ಮಾರ್ಚ್ 3 ಮತ್ತೊಂದು ಇತಿಹಾಸ ಸೃಷ್ಟಿಯಾಗುವ ಸಮಯ. ಈ ಅಮೋಘ ಘಳಿಗೆಗೆ ನೀವು ಸಾಕ್ಷಿಯಾಗಬೇಕು ಎಂದು ಮೇಕೆದಾಟು ಪಾದಯಾತ್ರೆಯಲ್ಲಿ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ಕೊಟ್ಟಿದ್ದಾರೆ. ಮೂರನೇ ತಾರೀಕು ಪಾದಯಾತ್ರೆ ಅಂತ್ಯ ಮಾಡಲಿದ್ದೇವೆ.

ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತರಿಗೆ ಮುಖಂಡರಿಗೆ ಮನವಿ ಮಾಡುತ್ತೇನೆ. ನೀವು ಮೂರನೇ ತಾರೀಖು ಬೆಳಗ್ಗೆ ಪ್ಯಾಲೆಸ್ಗೆ ಬಂದು ಅಲ್ಲಿಂದ ಪ್ಯಾಲೆಸ್ ನಿಂದ ಪಾದಯಾತ್ರೆಗೆ ಹೆಜ್ಜೆ ಹಾಕಬೇಕು. ಇದು ನಿಮಗೆ ಅನುಭವದ ಪಾಠ ನೀಡಲಿದೆ ಎಂದು ಕರುನಾಡಿಗೆ ಡಿಕೆ ಶಿವಕುಮಾರ್ ಕರೆ ನೀಡಿರುವ ವಿಡಿಯೋವನ್ನು ಕೂ ಮಾಡಲಾಗಿದೆ.

ವಿಡಿಯೋದಲ್ಲಿ ಡಿಕೆ ಶಿವಕುಮಾರ್, ಇದು ಒಂದು ಸಂಘಟನೆಗೆ ಮತ್ತು ಇತಿಹಾಸ ಪುಟಕ್ಕೆ ಎರಡಕ್ಕೂ ಸೇರುವ ಅವಕಾಶ ಇದೆ. ರಾಜ್ಯದ ಮೂಲೆ ಮೂಲೆಯಿಂದ ಸಂಘಟರು ಬನ್ನಿ. ಆರು ಕಿಲೋ ಮೀಟರ್ ಆದಮೇಲೆ ನ್ಯಾಷನಲ್ ಕಾಲೇಜಿಗೆ ಹೋಗುತ್ತೇವೆ. ನಾವು ನೀರಿಗಾಗಿ ನಡೆಯೋಣ. ಬನ್ನಿ ಹೆಜ್ಜೆ ಹಾಕಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Share News

About admin

Check Also

Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. …

Leave a Reply

Your email address will not be published. Required fields are marked *

You cannot copy content of this page