Breaking News

ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ. 1 ರಷ್ಟು ಸಮತಲ ಮೀಸಲು ಕಲ್ಪಿಸಿ ರೂಪಿಸಲಾಗಿರುವ ನಿಯಮವನ್ನು ಅಳವಡಿಸಿಕೊಳ್ಳುವಂತೆ ರಾಜ್ಯದ ಪ್ರಾಧಿಕಾರಗಳು ಹಾಗೂ ನಿಗಮ ಮಂಡಳಿಗಳಿಗೆ ಕೋರಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರ, ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ 1977 ರ ನಿಯಮ 9 ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿತ್ತು. ತಿದ್ದುಪಡಿ ಮೂಲಕ ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿಶೇ. 1 ರಷ್ಟು ಸಮತಲ ಮೀಸಲಾತಿ ಕಲ್ಪಿಸಿ 2021 ರ ಜು.6 ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *